5 ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.
ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು.