Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:25 - ಪರಿಶುದ್ದ ಬೈಬಲ್‌

25 ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:25
15 ತಿಳಿವುಗಳ ಹೋಲಿಕೆ  

ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಮೇಜು ಮತ್ತು ಅದರ ಮೇಲಿನ ವಸ್ತುಗಳು, ಬಂಗಾರದ ದೀಪಸ್ತಂಭ ಮತ್ತು ಅದರ ಉಪಕರಣಗಳು,


ದೀಪಸ್ತಂಭವನ್ನು ಮತ್ತು ಅದರ ಉಪಕರಣಗಳನ್ನು ಮಾಡಲು ಎಪ್ಪತ್ತೈದು ಪೌಂಡು ಅಪ್ಪಟ ಬಂಗಾರವನ್ನು ಉಪಯೋಗಿಸಿದನು.


ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.


ಧೂಪವೇದಿ ಮತ್ತು ಅದರ ಕೋಲುಗಳು, ಅಭಿಷೇಕತೈಲ, ಪರಿಮಳಧೂಪ, ಪವಿತ್ರ ಗುಡಾರದ ಬಾಗಿಲಿನ ಪರದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು