Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:6 - ಪರಿಶುದ್ದ ಬೈಬಲ್‌

6 ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:6
11 ತಿಳಿವುಗಳ ಹೋಲಿಕೆ  

ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ಆ ಬಳಿಕ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ನಕ್ಷೆಯನ್ನು ಕೊಟ್ಟನು. ದೇವಾಲಯ ಮತ್ತು ಅದರ ಮಂಟಪ, ಉಗ್ರಾಣದ ಕೋಣೆಗಳು, ಮೇಲುಪ್ಪರಿಗೆ, ಒಳಗಿನ ಕೋಣೆಗಳು ಮತ್ತು ಕೃಪಾಸನದ ಮಂದಿರದ ನಕ್ಷೆಗಳನ್ನು ಕೊಟ್ಟನು.


ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,


ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು.


ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು