Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:1 - ಪರಿಶುದ್ದ ಬೈಬಲ್‌

1 ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:1
14 ತಿಳಿವುಗಳ ಹೋಲಿಕೆ  

ಮಹಾಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು.


ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು.


ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.


ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.


ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”


ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.


ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.


ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.


ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ,


ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.


ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಲು ಅವರಿಗೆ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು