Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:30 - ಪರಿಶುದ್ದ ಬೈಬಲ್‌

30 ತರುವಾಯ ಅವರು ಪವಿತ್ರಕಿರೀಟವನ್ನು ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟವಾಗಿರುವ ಪಟ್ಟವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:30
11 ತಿಳಿವುಗಳ ಹೋಲಿಕೆ  

ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಆ ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ “ಯೆಹೋವನಿಗೆ ಇದು ಮೀಸಲಾಗಿರುವದು” ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.


“ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.


ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪುದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಈ ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಈ ವಸ್ತುಗಳನ್ನು ಮಾಡಲಾಯಿತು.


ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಈ ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು