Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:10 - ಪರಿಶುದ್ದ ಬೈಬಲ್‌

10 ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮೊದಲಿನಿಂದಲೂ ನೀನು ದಾಸನ ಸಂಗಡ ಮಾತಾಡಿದ ಮೇಲೆಯೂ ವಾಕ್ಚಾತುರ್ಯವಿಲ್ಲದವನು; ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಎಂದು ಹೇಳಲು ಯೆಹೋವನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:10
11 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.


ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.


ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು.


ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.


“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


“ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು.


ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.


ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು