Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:13 - ಪರಿಶುದ್ದ ಬೈಬಲ್‌

13 ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಮೋಶೆ - ಸ್ವಾಮೀ, ಈ ಕಾರ್ಯಕ್ಕೆ ಬೇರೊಬ್ಬನನ್ನು ನೇವಿುಸಬೇಕು ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೋಶೆಯು, “ಸ್ವಾಮಿ, ನೀವು ಬೇರೊಬ್ಬನನ್ನು ಕಳುಹಿಸಿರಿ, ಎಂದು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:13
16 ತಿಳಿವುಗಳ ಹೋಲಿಕೆ  

ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.


ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ


ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.


“ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನು ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.


ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು