Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:14 - ಪರಿಶುದ್ದ ಬೈಬಲ್‌

14 ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನು ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನ ಮೇಲೆ ಕೋಪಗೊಂಡು - ನಿನ್ನ ಅಣ್ಣನಾಗಿರುವ ಲೇವಿಯನಾದ ಆರೋನನಿದ್ದಾನಲ್ಲಾ, ಅವನು ಚೆನ್ನಾಗಿ ಮಾತಾಡಬಲ್ಲವನೆಂದು ನನಗೆ ಗೊತ್ತದೆ; ಅವನೇ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ; ನಿನ್ನನ್ನು ಕಂಡು ಸಂತೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:14
19 ತಿಳಿವುಗಳ ಹೋಲಿಕೆ  

ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.


ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.


ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.


ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು.


ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ:


ಸೊಲೊಮೋನನು ಇಸ್ರೇಲಿನ ದೇವರಾದ ಯೆಹೋವನನ್ನು ಅನುಸರಿಸದೆ ಬೇರೆ ಕಡೆಗೆ ತಿರುಗಿಕೊಂಡನು. ಆದ್ದರಿಂದ ಯೆಹೋವನು ಸೊಲೊಮೋನನ ಮೇಲೆ ಕೋಪಗೊಂಡನು. ಯೆಹೋವನು ಎರಡು ಸಲ ಸೊಲೊಮೋನನಿಗೆ ದರ್ಶನವನ್ನು ನೀಡಿದ್ದನು.


ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.


“‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.


ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.


“ಯಾಕೋಬನು ಈಜಿಪ್ಟಿಗೆ ಹೋದನು. ತರುವಾಯ, ಈಜಿಪ್ಟಿನವರು ಅವನ ವಂಶದವರಿಗೆ ಜೀವನವನ್ನು ಕಠಿಣಗೊಳಿಸಿದರು. ಆದ್ದರಿಂದ ಅವರು ಯೆಹೋವನಲ್ಲಿ ಸಹಾಯಕ್ಕಾಗಿ ಮೊರೆಯಿಟ್ಟರು. ಯೆಹೋವನು ಮೋಶೆ ಆರೋನರನ್ನು ಕಳುಹಿಸಿದನು. ಮೋಶೆ ಆರೋನರು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದು ಇಲ್ಲಿ ನೆಲೆಗೊಳಿಸಿದರು.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ಅವರು, “ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?” ಅಂದರು. ಯೆಹೋವನು ಅವರ ಮಾತುಗಳನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು