Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:2 - ಪರಿಶುದ್ದ ಬೈಬಲ್‌

2 ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನನ್ನು - ಅದೇನು ನಿನ್ನ ಕೈಯಲ್ಲಿರುವದು ಎಂದು ಕೇಳಿದನು. ಅವನು - ಇದು ಕೋಲು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:2
10 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


“ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.


ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು.


“ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.


ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ,


ಎಲೀಷನು, “ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು” ಎಂದು ಕೇಳಿದನು. ಆ ಸ್ತ್ರೀಯು, “ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು