Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:29 - ಪರಿಶುದ್ದ ಬೈಬಲ್‌

29 ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಲಿನ ಮುಂದೆ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:29
15 ತಿಳಿವುಗಳ ಹೋಲಿಕೆ  

“ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.


ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಬಳಿಕ ಮೋಶೆಯು ಪವಿತ್ರಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿಸಿದನು.


ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.


ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.


ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:


ಅವನು ಒಳಗಿನ ಪ್ರಾಕಾರವನ್ನು ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು