Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:9 - ಪರಿಶುದ್ದ ಬೈಬಲ್‌

9 “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:9
16 ತಿಳಿವುಗಳ ಹೋಲಿಕೆ  

ತರುವಾಯ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.


ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ಅವರು ಅವನಿಗೆ ತಾಮ್ರದ ವೇದಿಕೆಯನ್ನೂ ತಾಮ್ರದ ಜಾಳಿಗೆಯನ್ನೂ ವೇದಿಕೆಯನ್ನು ಹೊರುವುದಕ್ಕೆ ಉಪಯೋಗಿಸುವ ಕೋಲುಗಳನ್ನೂ ವೇದಿಕೆಯ ಎಲ್ಲಾ ಉಪರಕಣಗಳನ್ನೂ ಗಂಗಾಳವನ್ನೂ ಮತ್ತು ಅದರ ಕೆಳಗಿರುವ ಗದ್ದಿಗೇಕಲ್ಲನ್ನೂ ಮೋಶೆಗೆ ತೋರಿಸಿದರು.


ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.


ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.


ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಬೇಕು.


ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು. ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಬೆಂಕಿಯಂತೆ ಹೊಳೆಯುವ ರತ್ನಗಳ ಮೇಲೆ ನಡೆದಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು