Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:1 - ಪರಿಶುದ್ದ ಬೈಬಲ್‌

1 ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:1
26 ತಿಳಿವುಗಳ ಹೋಲಿಕೆ  

ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.


ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.


ರಾಜರುಗಳ ಮುಂದೆಯೂ ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ.


ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.


“ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.


ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.


ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!


ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.


ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ಫರೋಹನು ಸಮ್ಮತಿಸುವನು.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.


ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.


ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ” ಅಂದನು.


ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.


ನೀನು ಅವರನ್ನು ಬಿಡದೆ ಇನ್ನೂ ತಡೆದರೆ,


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು