Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:12 - ಪರಿಶುದ್ದ ಬೈಬಲ್‌

12 ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಜನರು ಐಗುಪ್ತ ದೇಶದಲ್ಲೆಲ್ಲಾ ತಿರುಗಿ ಹುಲ್ಲು ಸಿಕ್ಕದೆ ಕೂಳೆ ಕಿತ್ತು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:12
9 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.


ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.


ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.


ಆದ್ದರಿಂದ ನೀವೇ ಹೋಗಿ ಹುಲ್ಲನ್ನು ಕಂಡುಕೊಳ್ಳಿರಿ. ಆದರೆ ನೀವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಹೇಳಿದರು.


ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಬಲವಂತದಿಂದ ಮಾಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು