Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:16 - ಪರಿಶುದ್ದ ಬೈಬಲ್‌

16 ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಧಿಕಾರಿಗಳು ಹುಲ್ಲು ಒದಗಿಸದೆ ಇಟ್ಟಿಗೆಗಳನ್ನು ಮಾಡಬೇಕೆನ್ನುತ್ತಾರೆ. ಇದರಿಂದ ದಾಸರಾದ ನಾವು ಏಟು ತಿನ್ನಬೇಕಾಯಿತು. ತಪ್ಪು ತಮ್ಮ ಜನರದೇ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾಸರಿಗೆ ಅಧಿಕಾರಿಗಳು ಹುಲ್ಲು ಕೊಡದೆ ಇಟ್ಟಿಗೆಗಳನ್ನು ಮಾಡಬೇಕು ಅನ್ನುತ್ತಾರೆ; ಆದದರಿಂದ ದಾಸರು ಏಟುಗಳನ್ನು ತಿನ್ನಬೇಕಾಯಿತು; ತಪ್ಪು ಖಾವಂದರ ಜನರದೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:16
6 ತಿಳಿವುಗಳ ಹೋಲಿಕೆ  

ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಆಗ ಇಬ್ರಿಯ ಮೇಸ್ತ್ರಿಗಳು ಫರೋಹನ ಬಳಿಗೆ ಹೋಗಿ, “ನಿನ್ನ ಸೇವಕರಾದ ನಮಗೆ ನೀನು ಯಾಕೆ ಈ ರೀತಿ ಮಾಡುತ್ತಿ?


ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.


ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಜೆರುಸಲೇಮೇ, ನೀನು ಹುಟ್ಟಿದ ಆ ದಿವಸದಲ್ಲಿ ನಿನ್ನ ಹೊಕ್ಕಳ ನಾಳವನ್ನು ಕೊಯ್ಯಲು ಯಾರೂ ಇದ್ದಿಲ್ಲ. ನಿನ್ನ ಮೈಯನ್ನು ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನ್ನನ್ನು ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಬಟ್ಟೆ ಸುತ್ತಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು