Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:17 - ಪರಿಶುದ್ದ ಬೈಬಲ್‌

17 ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕವನು - ನೀವು ಬಹಳ ಮೈಗಳ್ಳರು, ನಾವು ಹೋಗಿ ಯೆಹೋವನಿಗೆ ಯಜ್ಞಮಾಡಿ ಬರಬೇಕನ್ನುವದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:17
6 ತಿಳಿವುಗಳ ಹೋಲಿಕೆ  

ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಇದನ್ನು ನೋಡಿದ ಶಿಷ್ಯರು ಆ ಸ್ತ್ರೀಯ ಮೇಲೆ ಕೋಪಗೊಂಡು, “ಆ ಸುಗಂಧತೈಲವನ್ನು ಏಕೆ ಹಾಳು ಮಾಡಿದೆ?


ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.


ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು.


ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು