Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:4 - ಪರಿಶುದ್ದ ಬೈಬಲ್‌

4 ಆದರೆ ಈಜಿಪ್ಟಿನ ರಾಜನು ಅವರಿಗೆ, “ಮೋಶೆ ಆರೋನರೇ, ನೀವು ಕೆಲಸಗಾರರಿಗೆ ತೊಂದರೆ ಮಾಡುತ್ತಿದ್ದೀರಿ, ಅವರು ತಮ್ಮ ಕೆಲಸ ಮಾಡಲಿ! ನೀವು ನಿಮ್ಮ ಕೆಲಸವನ್ನು ಮಾಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರಿಗೆ ಆ ಈಜಿಪ್ಟರ ಅರಸನು, “ಎಲೈ ಮೋಶೆ - ಆರೋನರೇ, ನೀವು ಮಾಡುತ್ತಾ ಇರುವುದೇನು? ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ಮಾಡುತ್ತಿದ್ದೀರಿ. ನಡೆಯಿರಿ ಗುಲಾಮಗಿರಿಗೆ” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಐಗುಪ್ತ್ಯರ ಅರಸನು ಅವರಿಗೆ - ಮೋಶೆಯೇ, ಆರೋನನೇ, ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ನೀವು ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಕ್ಕೆ ನಡೆಯಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:4
8 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ


ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು