Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:4 - ಪರಿಶುದ್ದ ಬೈಬಲ್‌

4 ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:4
21 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.


“ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ:


ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.


ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಈಜಿಪ್ಟನ್ನು ಬಿಟ್ಟು ಹೊರಟಿರಿ.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


“ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು