Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:7 - ಪರಿಶುದ್ದ ಬೈಬಲ್‌

7 ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:7
50 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”


ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.


“ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ


ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


ನೀವು ನನ್ನ ಜನರಾಗುವಿರಿ ಮತ್ತು ನಾನು ನಿಮ್ಮ ದೇವರಾಗುವೆನು.”


ನಾನೇ ನಿಮ್ಮ ದೇವರಾದ ಯೆಹೋವನು. ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಿ, ನನ್ನ ಆಜ್ಞೆಗಳನ್ನು ಅನುಸರಿಸಿರಿ. ನಾನು ಹೇಳಿದವುಗಳನ್ನು ಮಾಡಿರಿ.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.”


ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಮೈಮೇಲಿದ್ದ ಬಟ್ಟೆಗಳು ಹರಿದುಹೋಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


“ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


“ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಗಳನ್ನು ಬರಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ಹೆಸರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು