Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:8 - ಪರಿಶುದ್ದ ಬೈಬಲ್‌

8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:8
29 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಆಗ ನಾನು ಅಡವಿಯಲ್ಲಿ ಅವರೊಂದಿಗೆ ಇನ್ನೊಂದು ಮಾತುಕೊಟ್ಟೆನು. ನಾನು ಅವರನ್ನು ನಾನಾ ದೇಶಗಳಿಗೆ ಚದರಿಸಿಬಿಡುವೆನೆಂದು ಅವರಿಗೆ ತಿಳಿಸಿದೆನು.


ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?


ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು