ವಿಮೋಚನಕಾಂಡ 7:17 - ಪರಿಶುದ್ದ ಬೈಬಲ್17 ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು. ಅಧ್ಯಾಯವನ್ನು ನೋಡಿ |
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.