Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:1 - ಪರಿಶುದ್ದ ಬೈಬಲ್‌

1 ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆಹೋವನು ಮೋಶೆಗೆ ಇಂತೆಂದನು - ನೀನು ಫರೋಹನ ಬಳಿಗೆ ಹೋಗಿ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:1
15 ತಿಳಿವುಗಳ ಹೋಲಿಕೆ  

“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.


ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.


ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು.


ನನ್ನ ಜನರನ್ನು ನೀನು ಹೋಗಗೊಡಿಸದಿದ್ದರೆ ನಾನು ಈಜಿಪ್ಟನ್ನು ಕಪ್ಪೆಗಳಿಂದ ತುಂಬಿಸುವೆನು.


ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!


ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.


ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು.


ಬಳಿಕ ಈಜಿಪ್ಟಿನವರ ದೇಶವು ಕಪ್ಪೆಗಳಿಂದ ತುಂಬಿಹೋಯಿತು. ರಾಜನು ಮಲಗುವ ಕೋಣೆಯಲ್ಲಿಯೂ ಕಪ್ಪೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು