Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:14 - ಪರಿಶುದ್ದ ಬೈಬಲ್‌

14 ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಲು ದೇಶದಲ್ಲೆಲ್ಲಾ ದುರ್ವಾಸನೆ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:14
11 ತಿಳಿವುಗಳ ಹೋಲಿಕೆ  

ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು.


ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯು ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು.


ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು.


ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.


ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು