Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:17 - ಪರಿಶುದ್ದ ಬೈಬಲ್‌

17 ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:17
7 ತಿಳಿವುಗಳ ಹೋಲಿಕೆ  

ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.


ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.


ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು