Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:29 - ಪರಿಶುದ್ದ ಬೈಬಲ್‌

29 ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಮೋಶೆ - ನಾನು ನಿನ್ನ ಬಳಿಯಿಂದ ಹೊರಟಾಗ ಫರೋಹನಾದ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ಹುಳಗಳ ಬಾಧೆಯು ನಾಳೆಯಿಂದ ಇರಬಾರದೆಂಬದಾಗಿ ಯೆಹೋವನಿಗೆ ಪ್ರಾರ್ಥನೆ ಮಾಡುವೆನು. ಆದರೆ ಯೆಹೋವನಿಗೆ ಯಜ್ಞಮಾಡಲಿಕ್ಕೆ ನೀನು ಜನರಿಗೆ ಅಪ್ಪಣೆ ಕೊಡದೆ ಇನ್ನು ಮುಂದೆ ವಂಚನೆಮಾಡಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:29
9 ತಿಳಿವುಗಳ ಹೋಲಿಕೆ  

ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಆದರೆ ನೀನಾಗಲಿ ನಿನ್ನ ಅಧಿಕಾರಿಗಳಾಗಲಿ ಇನ್ನೂ ದೇವರಿಗೆ ಭಯಪಡುವುದಿಲ್ಲ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದನು.


ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು