Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:17 - ಪರಿಶುದ್ದ ಬೈಬಲ್‌

17 ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:17
14 ತಿಳಿವುಗಳ ಹೋಲಿಕೆ  

ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.


ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.


“‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ತೂರ್, ನೀನು ದೇವರೆಂದು ನೆನಸಿಕೊಂಡಿಯಲ್ಲಾ?


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು