Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:31 - ಪರಿಶುದ್ದ ಬೈಬಲ್‌

31 ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜವೆಗೋದಿಗೆ ತೆನೆಯೂ ಅಗಸೆಗೆ ಮೊಗ್ಗೆಯೂ ಆಗಿದ್ದದರಿಂದ ಆ ಎರಡು ಬೆಳೆಗೂ ನಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:31
6 ತಿಳಿವುಗಳ ಹೋಲಿಕೆ  

ರೂತಳು ಬೋವಜನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಗೋಧಿಯ ಮತ್ತು ಜವೆಗೋಧಿಯ ಸುಗ್ಗಿಕಾಲ ಮುಗಿಯುವವರೆಗೂ ಹಕ್ಕಲಾಯುತ್ತಿದ್ದಳು. ರೂತಳು ತನ್ನ ಅತ್ತೆಯಾದ ನೊವೊಮಿಯ ಸಂಗಡ ಮನೆಯಲ್ಲಿದ್ದಳು.


ಹೀಗೆ ನೊವೊಮಿ ಮತ್ತು ಅವಳ ಸೊಸೆ ಮೋವಾಬ್ಯಳಾದ ರೂತಳು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು.


ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ


“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.


ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು