Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:32 - ಪರಿಶುದ್ದ ಬೈಬಲ್‌

32 ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಗೋದಿಯೂ ಕಡಲೆಯೂ ಹಿಂದಿನ ಬೆಳೆಯಾದದರಿಂದ ಅದಕ್ಕೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:32
8 ತಿಳಿವುಗಳ ಹೋಲಿಕೆ  

ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು.


ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.


ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.


ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)


ವ್ಯವಸಾಯಗಾರನು ಮಣ್ಣನ್ನು ಹಸನುಮಾಡಿ ನಂತರ ಬೀಜ ಬಿತ್ತುವನು. ಬೇರೆಬೇರೆ ತರದ ಬೀಜಗಳನ್ನು ಬೇರೆಬೇರೆ ರೀತಿಯಲ್ಲಿ ಬಿತ್ತುವನು. ಅವನು ಗೋಧಿಯನ್ನಾಗಲಿ ಬಾರ್ಲಿಯನ್ನಾಗಲಿ ನೆಲದ ಮೇಲೆ ಬಿಸಾಡುವನು. ಗೋಧಿಯನ್ನು ಸಾಲಾಗಿ ಬಿತ್ತುವನು. ಬೇರೆಬೇರೆ ಗಿಡಗಳ ಬೀಜವನ್ನು ಬೇರೆಬೇರೆ ಸ್ಥಳಗಳಲ್ಲಿಯೂ ಬೇರೆಬೇರೆ ವಿಧಾನದಲ್ಲಿಯೂ ಬಿತ್ತುವನು.


ದೇವರು ಮತ್ತೆ ಹೇಳಿದ್ದೇನೆಂದರೆ: “ನೀನು ರೊಟ್ಟಿಯನ್ನು ಮಾಡಲು ಕಾಳುಗಳನ್ನು ತರಬೇಕು. ಸ್ವಲ್ಪ ಗೋಧಿ, ಬಾರ್ಲಿ, ಅಲಸಂದೆ, ಸಾವೆ, ಕಡಲೆ ಇವುಗಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಹಾಕಿ ಬೀಸಿ ಹಿಟ್ಟು ಮಾಡು. ಈ ಹಿಟ್ಟನ್ನು ನಾದಿ ರೊಟ್ಟಿ ಮಾಡು. ನೀನು ಮುನ್ನೂರತೊಂಭತ್ತು ದಿವಸಗಳ ಕಾಲ ನಿನ್ನ ಎಡಮಗ್ಗುಲಲ್ಲಿ ಮಲಗಿರುವಾಗ ಅದನ್ನು ಮಾತ್ರ ತಿನ್ನುವೆ.


ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.


ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು