ಹಗ್ಗಾಯ 1:1 - ಪರಿಶುದ್ದ ಬೈಬಲ್1 ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು: ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.
ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.
ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.