Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:9 - ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:9
25 ತಿಳಿವುಗಳ ಹೋಲಿಕೆ  

“ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳುಬಿದ್ದಿದೆ.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.


“ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು.


ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.


ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


“ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.


ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.


ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು