Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:12 - ಪರಿಶುದ್ದ ಬೈಬಲ್‌

12 ‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಪ್ರತಿಷ್ಠಿತ ಮಾಂಸವನ್ನು ಕಟ್ಟಿಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ, ಅನ್ನವನ್ನಾಗಲಿ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ ಅಥವಾ ಯಾವ ಆಹಾರ ಪದಾರ್ಥವನ್ನೇ ಆಗಲಿ ಸೋಕಿದರೆ ಅದು ಪವಿತ್ರವಾಗುತ್ತದೋ? ಎಂದು ಧರ್ಮವಿಧಿಯನ್ನು ವಿಚಾರಿಸು.” ಪ್ರವಾದಿ ಹಾಗೆ ವಿಚಾರಿಸಲು ಯಾಜಕರು ‘ಇಲ್ಲ’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನು ಇಲ್ಲವೆ ಗುಗ್ಗರಿಯನ್ನು ಅಥವಾ ದ್ರಾಕ್ಷಾರಸವನ್ನು ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವವೋ ಎಂದು ಧರ್ಮವಿಧಿಯನ್ನು ವಿಚಾರಿಸು. [ಪ್ರವಾದಿಯು ಹಾಗೆ ವಿಚಾರಿಸಲು] ಯಾಜಕರು ಇಲ್ಲವೆಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:12
8 ತಿಳಿವುಗಳ ಹೋಲಿಕೆ  

ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.


ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.


ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಸತ್ತ ನೊಣಗಳಿಂದ ಉತ್ತಮವಾದ ಪರಿಮಳತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹುಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು