Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:18 - ಪರಿಶುದ್ದ ಬೈಬಲ್‌

18 ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:18
11 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ!


“‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.


“ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು