Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:2 - ಪರಿಶುದ್ದ ಬೈಬಲ್‌

2 “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್ ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಜನಶೇಷ, ಇವರೆಲ್ಲರಿಗೆ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:2
7 ತಿಳಿವುಗಳ ಹೋಲಿಕೆ  

ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.


ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.


ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು