Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:4 - ಪರಿಶುದ್ದ ಬೈಬಲ್‌

4 ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:4
46 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.


ದುಷ್ಟರು ದೀರ್ಘಕಾಲ ಜೀವಿಸುವುದೇಕೆ? ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ?


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.


ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.


ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


“ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.


ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ!


ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?


ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!


ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು.


ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು?


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.


ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು