Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:6 - ಪರಿಶುದ್ದ ಬೈಬಲ್‌

6 ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:6
24 ತಿಳಿವುಗಳ ಹೋಲಿಕೆ  

ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.


ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ನಿನ್ನನ್ನು ಕಲ್ಲುಗಳಿಂದ ಕೊಲ್ಲುವದಕ್ಕಾಗಿ ಅವರು ಜನರನ್ನು ಒಂದುಗೂಡಿಸುವರು. ಬಳಿಕ ಅವರು ನಿನ್ನನ್ನು ಖಡ್ಗಗಳಿಂದ ತುಂಡುತುಂಡಾಗಿ ಕತ್ತರಿಸುವರು.


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.


ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು.


ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.


“ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.


ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು