Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:1 - ಪರಿಶುದ್ದ ಬೈಬಲ್‌

1 “ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಕೋವರದಲ್ಲಿ ನಿಂತುಕೊಳ್ಳುವೆನು, ಬುರುಜಿನ ಮೇಲೆ ನೆಲೆಯಾಗಿರುವೆನು, ಯೆಹೋವನು ನನಗೆ ಏನು ಹೇಳುವನೋ, ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರಕೊಡಬೇಕೋ ಎಂದು ಎದುರು ನೋಡುವೆನು [ಅಂದುಕೊಂಡೆನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಯೆಹೋವ ದೇವರು ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:1
23 ತಿಳಿವುಗಳ ಹೋಲಿಕೆ  

ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.


ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.


ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.


ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ನಾನು ಮಾಡಿರುವ ಪ್ರತಿಯೊಂದನ್ನು ದೇವರಿಗೆ ವಿವರಿಸುವೆನು. ನಾನು ಅಧಿಪತಿಯಂತೆ ತಲೆಯೆತ್ತಿಕೊಂಡು ಆತನ ಸಮೀಪಕ್ಕೆ ಬರುವೆನು.


ಇಜ್ರೇಲಿನ ಬುರುಜಿನಲ್ಲಿ ಒಬ್ಬ ಕಾವಲುಗಾರನು ನಿಂತಿದ್ದನು. ಅವನು ಯೇಹುವಿನ ದೊಡ್ಡಗುಂಪು ಬರುತ್ತಿರುವುದನ್ನು ನೋಡಿದನು. ಅವನು, “ನಾನು ಜನರ ದೊಡ್ಡ ಗುಂಪನ್ನು ನೋಡುತ್ತಿರುವೆನು” ಎಂದು ಹೇಳಿದನು. ಯೋರಾಮನು, “ಅವರನ್ನು ಸಂಧಿಸಲು ಯಾರನ್ನಾದರೂ ಕುದುರೆಯ ಮೇಲೆ ಕಳುಹಿಸಿ, ‘ಶುಭವಾರ್ತೆಯುಂಟೋ?’ ಎಂದು ಅವನು ಅವರನ್ನು ಕೇಳಲಿ” ಎಂದು ಹೇಳಿದನು.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.


“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!


ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.


ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.


ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.


“ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು