Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:13 - ಪರಿಶುದ್ದ ಬೈಬಲ್‌

13 ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:13
12 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


“ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು