Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:17 - ಪರಿಶುದ್ದ ಬೈಬಲ್‌

17 ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:17
15 ತಿಳಿವುಗಳ ಹೋಲಿಕೆ  

ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.


“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.


ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.


ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು