Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:6 - ಪರಿಶುದ್ದ ಬೈಬಲ್‌

6 ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:6
25 ತಿಳಿವುಗಳ ಹೋಲಿಕೆ  

ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.


ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’


ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.


“ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?


ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:


ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.


“ಪಟ್ಟಣ ಕಟ್ಟುವುದಕ್ಕಾಗಿ ಜನರನ್ನು ಕೊಲ್ಲುವವನಿಗೂ ಪಟ್ಟಣದ ಕೋಟೆಗಳನ್ನು ಭದ್ರಪಡಿಸಲು ದುಷ್ಕೃತ್ಯಗಳನ್ನು ಮಾಡುವವನಿಗೂ ಕೇಡಾಗುವದು.


ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು