Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:7 - ಪರಿಶುದ್ದ ಬೈಬಲ್‌

7 “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲಿದುಕೊಂಡಿರುವೆ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯಗ್ರಸ್ತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನನ್ನು ಕಚ್ಚುವವರು ಫಕ್ಕನೆ ತಲೆಯೆತ್ತುವರು, ನಿನ್ನನ್ನು ಒದ್ದಾಡಿಸುವವರು ಎಚ್ಚರಗೊಳ್ಳುವರು; ನೀನು ಅವರಿಗೆ ಸೂರೆಯಾಗುವಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:7
19 ತಿಳಿವುಗಳ ಹೋಲಿಕೆ  

ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


“ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.


“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.


ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.


ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು