Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:10 - ಪರಿಶುದ್ದ ಬೈಬಲ್‌

10 “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:10
26 ತಿಳಿವುಗಳ ಹೋಲಿಕೆ  

“ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”


ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.


‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ಯೆಹೋವನು ಹೇಳುವುದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು