Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:4 - ಪರಿಶುದ್ದ ಬೈಬಲ್‌

4 ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:4
32 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.


ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.


ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.


ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.


ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.


ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.


ಭೂಮಿಯು ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಯಾರೊಬ್ಬಾಮನ ಮಗನಾದ ಜೆಕರ್ಯನು ಇಸ್ರೇಲಿನ ಸಮಾರ್ಯದಲ್ಲಿ ಆರು ತಿಂಗಳ ಕಾಲ ಆಳಿದನು. ಅದು ಯೆಹೂದದ ರಾಜನಾಗಿದ್ದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷವಾಗಿತ್ತು.


ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, ‘ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ.’


ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,


ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆಯನ್ನು ಕೂಡಲು, ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “‘ಆ ಮಗನಿಗೆ ಮಹೇರ್ ಶಾಲಾಲ್ ಹಾಷ್ ಬಜ್‌’ ಎಂಬ ಹೆಸರನ್ನಿಡು.


ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು