Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:4 - ಪರಿಶುದ್ದ ಬೈಬಲ್‌

4 ನಾನು ಅವರನ್ನು ಪ್ರೀತಿ ಎಂಬ ಹಗ್ಗಗಳಿಂದ ಹತ್ತಿರಕ್ಕೆ ಎಳೆದುಕೊಂಡೆನು. ಅವರಿಗೆ ಸ್ವತಂತ್ರವನ್ನು ಕೊಟ್ಟೆನು. ನಾನು ಬಾಗಿ ಅವರಿಗೆ ಉಣಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು; ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ ಅವರಿಗೆ ತೀನಿಯನ್ನು ನಯದಿಂದ ಇಕ್ಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:4
14 ತಿಳಿವುಗಳ ಹೋಲಿಕೆ  

ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.


ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.


ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.


ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.


ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯದೇವರು ಸಹಾಯ ಮಾಡಲಿಲ್ಲ.


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು