Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:6 - ಪರಿಶುದ್ದ ಬೈಬಲ್‌

6 ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:6
25 ತಿಳಿವುಗಳ ಹೋಲಿಕೆ  

ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶಮಾಡುವೆನು.


ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.


ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.


ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.


ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕಾನೇಕ ಕೆಟ್ಟಕಾರ್ಯಗಳನ್ನು ಮಾಡಿದರು.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು!


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ.


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು