Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:11 - ಪರಿಶುದ್ದ ಬೈಬಲ್‌

11 ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:11
18 ತಿಳಿವುಗಳ ಹೋಲಿಕೆ  

“ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.


ಗಿಲ್ಯಾದು ಕೆಟ್ಟತನವನ್ನು ನಡಿಸುವ ಜನರಿಂದ ಕೂಡಿದ ನಗರವಾಗಿದೆ. ಜನರು ಇತರರನ್ನು ಮೋಸಗೊಳಿಸಿ ಕೊಲೆಮಾಡಿರುತ್ತಾರೆ.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


“ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು