ಹೋಶೇಯ 12:2 - ಪರಿಶುದ್ದ ಬೈಬಲ್2 ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು. ಅಧ್ಯಾಯವನ್ನು ನೋಡಿ |
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
ನೆಗೆವ್ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.