Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:3 - ಪರಿಶುದ್ದ ಬೈಬಲ್‌

3 ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕೋಬನು ಗರ್ಭದಲ್ಲಿ ಅಣ್ಣನನ್ನು ವಂಚಿಸಿದನು; ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:3
14 ತಿಳಿವುಗಳ ಹೋಲಿಕೆ  

ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.


ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


“ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು.


ನಿನ್ನ ಅಂತ್ಯವು ಈಗ ಬರುವುದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.


ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರಗಳೇ ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು