Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:1 - ಪರಿಶುದ್ದ ಬೈಬಲ್‌

1 ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:1
26 ತಿಳಿವುಗಳ ಹೋಲಿಕೆ  

“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.


ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.


“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’


“ಒಂದುವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಬದಲಾಯಿಸಿ, ದುಷ್ಟತ್ವವನ್ನು ನಿಲ್ಲಿಸಿ, ಅವನು ನೀತಿವಂತನಾಗಿ ಬಾಳಿ


“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.


ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.


ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.


ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು