Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:7 - ಪರಿಶುದ್ದ ಬೈಬಲ್‌

7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:7
17 ತಿಳಿವುಗಳ ಹೋಲಿಕೆ  

ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


ಭೂಮಿಯು ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.


ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.


ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.


ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.


ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳದ್ರವ್ಯದಂತೆ ಸುವಾಸನೆಭರಿತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು