Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:11 - ಪರಿಶುದ್ದ ಬೈಬಲ್‌

11 ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:11
17 ತಿಳಿವುಗಳ ಹೋಲಿಕೆ  

“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.


ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”


ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು