Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:15 - ಪರಿಶುದ್ದ ಬೈಬಲ್‌

15 ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:15
33 ತಿಳಿವುಗಳ ಹೋಲಿಕೆ  

ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.


ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


ಆದರೆ ನೀನು ಎಳೆಯವಳಾಗಿದ್ದಾಗ ನಿನ್ನೊಡನೆ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ನಾನು ಅದನ್ನು ಶಾಶ್ವತವಾದ ಒಡಂಬಡಿಕೆಯನ್ನಾಗಿ ಮಾಡುವೆನು.


ನಿನ್ನ ಅಸಹ್ಯಕೃತ್ಯಗಳನ್ನೂ ಸೂಳೆಯಂತೆ ವರ್ತಿಸುತ್ತಿರುವುದನ್ನೂ ನಿನ್ನ ಎಳೆತನದ ಸಮಯವನ್ನೂ ಮತ್ತು ನಿನ್ನ ಸ್ವಂತ ರಕ್ತದಲ್ಲಿ ಬೆತ್ತಲೆಯಾಗಿ ಹೊರಳಾಡುತ್ತಿದ್ದುದನ್ನೂ ನೀನು ಮರೆತುಬಿಟ್ಟೆ.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದ್ದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷಿತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು.


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ:


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”


ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು ನಂಬಿ ಆತನನ್ನು ಸಂಕೀರ್ತಿಸಿದರು.


ಆಗ ಇಸ್ರೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಅದರ ಕುರಿತು ಹಾಡಿ!


“ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.


ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.


ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.


ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು:


ಆದರೆ ಈಗ ನೀನು, ‘ನನ್ನ ತಂದೆಯೇ, ನಾನು ಚಿಕ್ಕ ಮಗು ಆದಾಗಿನಿಂದ ನೀನು ನನ್ನ ಪ್ರೀತಿಯ ಸ್ನೇಹಿತನಾಗಿದ್ದೆ’ ಎಂದು ಕೂಗುತ್ತಲಿರುವೆ.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.


ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು